Monday, November 20, 2017

ಕಾರಣ ಮತ್ತು ಪರಿಣಾಮ

ಕಾರಣ ಮತ್ತು ಪರಿಣಾಮ

Complete works of Swamy Vivekananda ಸರಮಾಲೆ ಪುಸ್ತಕಗಳಲ್ಲಿ ಕರ್ಮಯೋಗದಲ್ಲಿ Cause and Effect ನ ಬಗ್ಗೆ ಸವಿಸ್ತಾರವಾಗಿ ಬರೆದಿದ್ದಾರೆ. Every thing happens with a reason....ನಮ್ಮ ನಮ್ಮ ಕರ್ಮಫಲಾನುಸಾರ ಜೀವನದಲ್ಲಿ ಘಟನೆಗಳು ನಡೆಯುತ್ತವೆ.
 ‎
 ‎Parliament of Religions ನಿಗದಿತ ಸಮಯದಂತೆ ಜುಲೈ 1893 ಯಲ್ಲಿ ನಡೆದಿದ್ದರೆ ಬಹುಷಃ ಪರಿಚಯ ಪತ್ರವಿಲ್ಲದೆ, ಯಾರ ಪರಿಚಯವೂ ಇಲ್ಲದೆ ಸಮ್ಮೇಳನದಲ್ಲಿ ಭಾಗವಹಿಸದೆ ಮರುಳುತ್ತಿದ್ದರೇನೋ, ಭಾಗವಹಿಸಿಧ್ಧರೂ ಸಹ ಅಂತಹ ಒಂದು ಅಧ್ಭುತವಾದ, ಸಂಮೋಹಕ ಭಾಷಣ ಕೊಡಲಾಗುತ್ತಿತ್ತೇ?. ನೆರೆದಿದ್ದ 7000 ಪ್ರತಿನಿಧಿಗಳಲ್ಲಿ , ಸಮ್ಮೇಳನದ ಅಧ್ಯಕ್ಷ ಜಾನ್ ಬರ್ರೋಸ್ ಇವರನ್ನೇ ಪ್ರತ್ಯೇಕವಾಗಿ ಕರೆದು ಶ್ಲಾಘನೆಯ ಹೊಳೆಯನ್ನೇ ಹರಿಸಿ, ನೀವು ಒಟ್ಟು ಆರು ಸಲ ಭಾಷಣ ಮಾಡಬೇಕೆಂಬ ವಿಶೇಷ ಆಮಂತ್ರಣ ನೀಡುತ್ತಿದ್ದರೇ?
 ‎ಸಮ್ಮೇಳನ ಮುಗಿದ ಮೇಲೂ ಸುಮಾರು ಮೂರೂವರೆ ವರ್ಷಗಳ ಕಾಲ ಅಮೆರಿಕಾದಲ್ಲಿ ಉಳಿಯುತ್ತಿದ್ದರೇ?  ಅಷ್ಟೊಂದು ಅಮೆರಿಕನ್ನರ ಆರಾಧ್ಯದೈವವಾಗುತ್ತಿದ್ದರೇ?
 ‎ಇದೇ ಕರ್ಮಯೋಗದ "ಕಾರಣ ಮತ್ತು ಪರಿಣಾಮ" ಇದ್ದಿರಬಹುದು.


 ‎ಬೋಸ್ಟನ್ನಿನಿಂದ ಕೇಟ್ , ಪ್ರೊಫೆಸರ್ ರೈಟ್ ಮತ್ತು ಅವರ ಕುಟುಂಬದವರಿಗೆ ವಿದಾಯ ಹೇಳಿ ರೈಲಿನಲ್ಲಿ ಸಮ್ಮೇಳನಕ್ಕೆಂದು ಚಿಕಾಗೋಗೆ ಹೊರಟ ವಿವೇಕಾನಂದರಿಗೆ ಇನ್ನೊಂದು ಸುತ್ತಿನ ಅವಘಡವೋ, ಸಂಚಿತ ಕರ್ಮಫಲವೋ ಅಥವಾ ಅವರನ್ನು ಪ್ರವಾದಿಗಳ ಮಟ್ಟಕ್ಕೇರಿಸುವ  ಅಗೋಚರ ಶಕ್ತಿಗಳ ಸಂಚೋ..ಗೊತ್ತಿಲ್ಲ, ಆಟವಂತೂ ಶುರುವಾಗಿತ್ತು.
 ‎
 ‎ಚಿಕಾಗೋದಲ್ಲಿ ಪ್ರೊಫೆಸರ್ ರೈಟ್ ರವರ ಸ್ನೇಹಿತರೊಬ್ಬರ ಮನೆಯಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯನ್ನು ಮಾಡಿದ್ದರು. ಅವರ ಮನೆಯ ವಿಳಾಸ ಮತ್ತು ಪರಿಚಯ ಪತ್ರವನ್ನು ಒಂದು ಲಕೋಟೆಯಲ್ಲಿ ಹಾಕಿ ಕೊಟ್ಟಿದ್ದರು, ಆದರೆ ರೈಲಿನಿಂದ ಇಳಿಯುವಾಗ ಎಲ್ಲೋ ಬಿದ್ದು ಹೋಗಿಬಿಟ್ಟಿತು. ಈಗೇನು ಮಾಡುವುದು? ದಿಕ್ಕೇ ತೋಚದಂತಾಯಿತು .
 ‎ಆ ರಾತ್ರಿಯನ್ನು ಅಲ್ಲೇ ನಿಂತಿದ್ದ ಒಂದು ರೈಲ್ವೇ ಬೋಗಿಯಲ್ಲಿ ಕಳೆದರು. ಬೆಳಗ್ಗೆ ಎದ್ದವರಿಗೆ ತಾಳಲಾರದ ಹಸಿವು, ಕೈಯಲ್ಲಿ ಬಿಡಿಗಾಸಿಲ್ಲ. ಹತಾಶರಾಗಿ ಚಿಕಾಗೋ ನಗರದ ಬೀದಿಗಳಲ್ಲಿ ಸುತ್ತಾಡುತ್ತಾ ಲೇಕ್ ಶೋರ್ ಡ್ರೈವ್ ಎಂಬಲ್ಲಿಗೆ ಬಂದರು. ಆಹಾರಕ್ಕೆ ಭಿಕ್ಷೆ ಬೇಡಲೂ ಯೋಚಿಸಿದರು, ಆದರೆ ಅವರ ದಿರಿಸಿನಿಂದಾಗಿ ಹಾದು ಹೋಗುವವರೆಲ್ಲಾ ಅನುಮಾನದಿಂದ ನೋಡುತ್ತಾ ಹೋಗುತ್ತಿದ್ದರು, ಹಾಗಾಗಿ ಇನ್ನೂ ಅವಮಾನಿತನಾಗುವುದು ಬೇಡ ಎಂದು ಅಲ್ಲೇ ಮನೆಯೊಂದರ ಮುಂದಿನ ಮರದ ನೆರಳಿನಲ್ಲಿ ಕುಸಿದು ಕುಳಿತರು, ಹಸಿವಿನಿಂದ, ಹತಾಶೆಯಿಂದ, ನಿರಾಶೆಯಿಂದ,  ಇದು ಪ್ರಾರಬ್ದ ಕರ್ಮವೇ, ಸಂಚಿತ ಕರ್ಮವೇ...ಅವರ ಅಮ್ಮನ ನೆನಪು ಬಂದು, ದುಖಃ ಒತ್ತರಿಸಿ ಬಂತು.

 ‎
 ‎ಅದೇ ಸಮಯಕ್ಕೆ ಆ ಮನೆಯ ಕಿಟಕಿಯಿಂದ ಇವರನ್ನು ನೋಡುತ್ತಾ ಕುಳಿತಿದ್ದರು ಒಬ್ಬ ಮಹಿಳೆ...
 ‎
 ‎ಮುಂದೆ ಇವರ "Dear Mother" ಎಂದು ನೂರಾರು ಪತ್ರಗಳ ಸಂಭೋದಿತೆ, ಆ ಮನೆಯನ್ನೇ ವಿವೇಕಾನಂದರ ಅಮೆರಿಕದ ಮುಖ್ಯಾಲಯವನ್ನಾಗಿ ಮಾಡಿದ ಮಾತೆ, ಮುಂದೆ ಅಮೆರಿಕಾದ ಮೂಲೆ ಮೂಲೆಗಳಲ್ಲಿ ಮಾಡಿದ ಉಪನ್ಯಾಸಕ್ಕೆ ಸಿಗುತ್ತಿದ್ದ ಸಂಭಾವನೆಗೆ ತಿಜೋರಿಯಾಗಿ, ನೊಂದ ಮನಸ್ಸಿಗೆ ಸಾಂತ್ವಾನ ಹೇಳುವ ಮೈತ್ರಿಯಾಗಿ, ತಪ್ಪು ಮಾಡಿ ಒಪ್ಪಿಕೊಂಡಾಗ ಧರಿತ್ರಿಯಾಗಿ...ವಿವೇಕಾನಂದರನ್ನು ಮಗುವಿನಂತೆ ಪೋಷಿಸಿದ ದೇವಿ ಸ್ವರೂಪಿ ಶ್ರೀಮತಿ ಎಲ್ಲೆನ್ ಹೇಲ್...
 ‎
ವಿವಾಕಾನಂದರಿಗಾಗೇ ಕಾಯುತ್ತಿದ್ದರೇನೋ ಎನ್ನುವಂತೆ ಕುಳಿತಿದ್ದರು ಕಿಟಿಕಿಯಿಂದ ನೋಡುತ್ತಾ, ಸ್ವಲ್ಪಹೊತ್ತು ನೋಡಿ ಹೊರ ಬಂದರು ವಿವೇಕಾನಂದನಂದರ ಮುಖವನ್ನೇ...ಈಗ ಬಂದೆಯಾ ಎನ್ನುವಂತೆ ನೋಡಿದರು. ಬಾ...ಒಳಗೆ ಎಂದು ಸ್ವಾಗತಿಸಿ ಕರೆದುಕೊಂಡು ಹೋದರು.

ಕರ್ಮಫಲ..ಅಮೆರಿಕಾದ ಬಾಗಿಲು ತೆರೆಯಿತು.

ವಿಂಗ್ ಕಮಾಂಡರ್ ಸುದರ್ಶನ
sudarshanbadangod@gmail.com

No comments:

Post a Comment